Connect with us

LATEST NEWS

ಕೊರೊನಾಗೆ ಉಳ್ಳಾಲ ಮೂಲದ ಮಹಿಳೆ ಸಾವು

ಮಂಗಳೂರು ಜೂನ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆಸಿದ್ದು ಇಂದು ಬೆಳಿಗ್ಗ ಕೊರೊನಾ ಮತ್ತೊಂದು ಬಲಿ ಪಡೆದಿದೆ. ನಿನ್ನೆ ಸಂಜೆಯಷ್ಟೇ ಕೊರೊನಾ ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ, ಉಳ್ಳಾಲ ಕೋಟೆಪುರ ನಿವಾಸಿ 60ರ ಹರೆಯದ ಮಹಿಳೆ ವೆನ್ಲಾಕ್ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ

ಮಹಿಳೆ ಲಿವರ್, ಡಯಾಬಿಟಿಸ್ ಮತ್ತು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದರೊಂದಿಗೆ ದಕ್ಷಿಣಕನ್ನಡದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಮೂರು ಮಂದಿ ಕೊರೊನಾಗೆ ಬಲಿಯಾಗಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *