UDUPI
ಕೊರೊನಾಗೆ ಉಡುಪಿಯಲ್ಲಿ ಮತ್ತೊಂದು ಬಲಿ
ಉಡುಪಿ ಜುಲೈ 21: ಉಡುಪಿಯಲ್ಲಿ ಕೊರೊನಾ ಮತ್ತೊಂದು ಬಲಿ ತೆಗೆದುಕೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಯುವಕನೋರ್ವ ಮೃತಪಟ್ಟಿದ್ದು, ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕೇರಳದ ಕಣ್ಣೂರು ಜಿಲ್ಲೆಯ 35 ವರ್ಷದ ಯುವಕ ಕಿಡ್ನಿ ಸಮಸ್ಯೆಯಿಂದ ಕಳೆದ ಕೆಲವು ಸಮಯಗಳಿಂದ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಆತನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆತನಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಲಾಕ್ ಡೌನ್ ಮತ್ತು ಉಡುಪಿ ಗಡಿ ಮುಚ್ಚಿರುವ ಕಾರಣ ಯುವಕ ಸಂಬಂಧಿಗಳಿಗೆ ಮಣಿಪಾಲಕ್ಕೆ ಬರಲು ತೊಂದರೆಯಾಗಿದ್ದು, ಮೃತ ಯುವಕನ ಅಂತ್ಯ ಸಂಸ್ಕಾರವನ್ನು ಉಡುಪಿಯಲ್ಲೇ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ವರದಿಯಾಗಿದೆ.
You must be logged in to post a comment Login