LATEST NEWS
ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!
ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಅದೇರೀತಿ ಬಸ್, ರೈಲು, ವಿಮಾನ ಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ಆರೋಗ್ಯ ಸಮಸ್ಯೆ ಇರುವವರು, ವೃದ್ಧರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಆಯೋಜಿಸಬೇಕು.
ಕೈಗಾರಿಕೆ ಸಂಸ್ಥೆ, ಗಾರ್ಮೆಂಟ್ಸ್ ಸಹಿತ ಇತರ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
You must be logged in to post a comment Login