Connect with us

    LATEST NEWS

    ಮುಕ್ಕೂರು: ಕೊರೊನಾ ವಿರುದ್ದ ಮುನ್ನೆಚ್ಚರಿಕೆ ಕರಪತ್ರ ಬಿಡುಗಡೆ

    ಮುಕ್ಕೂರು: ಕೊರೊನಾ ವಿರುದ್ದ ಮುನ್ನೆಚ್ಚರಿಕೆ ಕರಪತ್ರ ಬಿಡುಗಡೆ

    ಮುಕ್ಕೂರು : ಕುಂಡಡ್ಕ- ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಕೊರೊನಾ ವೈರಸ್ ತಡೆಗಟ್ಟುವ ಕುರಿತು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗೆಗಿನ ಜಾಗೃತಿ ಕರಪತ್ರ ಬಿಡುಗಡೆ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಚೇರಿ ಮುಂಭಾಗ ನಡೆಯಿತು.

    ಕರಪತ್ರ ಬಿಡುಗಡೆಗೊಳಿಸಿದ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, ರೋಗ ಬಾರದ ಹಾಗೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ನಾವೆಲ್ಲರೂ ಗಮನ ಹರಿಸಬೇಕು.ಈ ನಿಟ್ಟಿನಲ್ಲಿ ಕರಪತ್ರದಲ್ಲಿನ ಮಾಹಿತಿ ಪ್ರಯೋಜನಕಾರಿ ಎಂದರು.

    ಪೆರುವಾಜೆ ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ ಮಾತನಾಡಿ, ‌ಅನಗತ್ಯ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಕರಪತ್ರದ ಮೂಲಕ ಮನೆ ಮನೆಗೆ ಮಾಹಿತಿ ನೀಡುವ ಪ್ರಯತ್ನ ಉತ್ತಮವಾದದು.ಇದರ ಮಾಹಿತಿ ಪಡೆದು ಮುನ್ನೆಚ್ಚರಿಕೆಗೆ ಗಮನ ಹರಿಸೋಣ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply