LATEST NEWS
ಕರೋನಾ ಭೀತಿ ಮಾರ್ಚ್ 23 ರೊಳಗೆ ಪರೀಕ್ಷೆ ಮುಗಿಸಲು ಶಿಕ್ಷಣ ಇಲಾಖೆ ಆದೇಶ
ಕರೋನಾ ಭೀತಿ ಮಾರ್ಚ್ 23 ರೊಳಗೆ ಪರೀಕ್ಷೆ ಮುಗಿಸಲು ಶಿಕ್ಷಣ ಇಲಾಖೆ ಆದೇಶ
ಮಂಗಳೂರು ಮಾರ್ಚ್ 10: ರಾಜ್ಯದಲ್ಲಿ ಕೊರೊನಾ ಆತಂಕ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಾ. 23ರೊಳಗೆ ವಾರ್ಷಿಕ ಪರೀಕ್ಷೆಗಳನ್ನು ಮುಗಿಸಿ ವಿಧ್ಯಾರ್ಥಿಗಳಿಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
1 ರಿಂದ 5ನೆ ತರಗತಿಯವರೆಗಿನ ಮಕ್ಕಳಿಗೆ ಮಾರ್ಚ್ 16ರೊಳಗೆ ಪರೀಕ್ಷೆ ಮುಗಿಸಬೇಕು ಹಾಗೂ ಮಾ. 23ರೊಳಗೆ 6ರಿಂದ 9ನೇ ತರಗತಿವರೆಗಿನ ಪರೀಕ್ಷೆ ಮುಗಿಸಬೇಕೆಂದು ಆದೇಶಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯ ದಿನಾಂಕಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಇಲಾಖೆ ತಿಳಿಸಿದೆ.
ಇತ್ತ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಾ. 23ರೊಳಗೆ ವಾರ್ಷಿಕ ಪರೀಕ್ಷೆಗಳನ್ನು ಮುಗಿಸಬೇಕು ಎಂಬುದಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಜಿಲ್ಲೆಯ ಎಲ್ಲ ಖಾಸಗಿ, ಅನುದಾನಿತ, ಅನುದಾನರಹಿತ ಹಾಗೂ ಸರಕಾರಿ ಶಾಲೆಗಳಿಗೆ ಇದು ಅನ್ವಯವಾಗಲಿದೆ.
You must be logged in to post a comment Login