Connect with us

    KARNATAKA

    ಕೊರೊನಾ ಎರಡನೇ ಅಲೆ – ಜಾತ್ರೆಗಳಿಗೆ ನಿರ್ಬಂಧ ಹೇರಿದ ರಾಜ್ಯ ಸರಕಾರ

    ಬೆಂಗಳೂರು ಎಪ್ರಿಲ್ 17: ರಾಜ್ಯದಾದ್ಯಂತ ಕೊರೊನಾ ಎರಡನೇ ಅಲೆ ಭೀಕರವಾಗಿ ಹಬ್ಬತ್ತಿರುವ ಹಿನ್ನಲೆ ರಾಜ್ಯ ಸರಕಾರ ಜಾತ್ರೆಗಳನ್ನು ನಿಷೇಧಿಸಿ ಆದೇಶಿಸಿದ್ದು, ಜಾತ್ರೆಗಳನ್ನು ನಡೆಸಲು ಬಿಟ್ಟರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ ನೀಡಿದ್ದಾರೆ.


    ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿಯ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಜೊತೆ ಜಿಲ್ಲಾಧಿಕಾರಿಗಳೊಂದಿಗೆ ಶನಿವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಣ್ಣ ಜಾತ್ರೆಗಳಾದರೆ ತಹಶೀಲ್ದಾರ್‌ ಹೊಣೆ ಆಗಬೇಕಾಗುತ್ತದೆ ಎಂದು ಅಶೋಕ ತಿಳಿಸಿದರು.


    ಕೊರೊನಾ ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮದುವೆ ಮನೆಗಳಲ್ಲಿ ಜನರನ್ನು ನಿಯಂತ್ರಿಸದಿದ್ದರೆ ಎಫ್‌ಐಆರ್‌ ದಾಖಲಿಸಲಾಗುವುದು. ಒಂದು ವೇಳೆ ಹೆಚ್ಚುವರಿ ಪಾಸ್‌ ನೀಡಿದರೆ ಅಂಥ ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.


    ಕಲ್ಯಾಣ ಮಂಟಪ ಬುಕ್‌ ಮಾಡಲು ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ. ಜಿಲ್ಲಾಡಳಿತ ನಿಗದಿತ ಸಂಖ್ಯೆಯ ಪಾಸ್‌ ವಿತರಿಸಲಿದೆ. ಈಗಾಗಲೇ ಬುಕ್‌ ಮಾಡಿದ್ದರೆ ಸಮಸ್ಯೆ ಇಲ್ಲ’ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply