Connect with us

KARNATAKA

ರಾಜ್ಯದಲ್ಲಿನ್ನು ಕೊರೊನಾ ಟೆಸ್ಟ್ ನಿರಾಕರಿಸುವಂತಿಲ್ಲ….!!

ಬೆಂಗಳೂರು ಅಕ್ಟೋಬರ್ 7: ರಾಜ್ಯದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇರುವ ಹಿನ್ನಲೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದ್ದು. ಕೊರೊನಾ ಸಾಂಕ್ರಾಮಿಕದ ಪ್ರಾರಂಭಿಕ ಹಂತದಲ್ಲಿದ್ದ ಹಳೇ ನಿಯಮಗಳನ್ನು ಈಗ ಮತ್ತೆ ಒಂದೊಂದಾಗಿ ಜಾರಿ ತರಲಾಗುತ್ತಿದೆ.


ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಸರಕಾರ ಯಾರಿಗೆ ಕೋವಿಡ್-19 ಪರೀಕ್ಷೆಗೆ ಒಳಪಡಲು ಸೂಚಿಸಲಾಗುತ್ತದೆಯೋ ಅಂತಹವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಗೆ ನಿರಾಕರಿಸುವಂತಿಲ್ಲ. ಒಂದು ವೇಳೆ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ ಎಂದು ಹಠ ಹಿಡಿದರೆ 3 ವರ್ಷ ಜೈಲು ಅಥವಾ 50 ಸಾವಿರ ದಂಡದ ಶಿಕ್ಷೆ ವಿಧಿಸಲಾಗುತ್ತದೆ. ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.


ರೋಗ ಹರಡುವಿಕೆ ತಡೆಯುವ ಉದ್ದೇಶದಿಂದ ಕೊರೊನಾ ಸೋಂಕಿತರು ಹಾಗೂ ಸೋಂಕು ಶಂಕಿತರನ್ನು ಗುರುತಿಸಲಾಗುತ್ತಿದೆ. ಇದರಿಂದ ಮರಣ ಪ್ರಮಾಣ ಕೂಡ ಕಡಿಮೆ ಮಾಡಲು ಸಾಧ್ಯ. ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರು, ಕೋವಿಡ್ ಕಾರ್ಯದಲ್ಲಿ ನಿರತರಾಗಿರುವ ಆರೋಗ್ಯ ಸಿಬ್ಬಂದಿ, ಕಂಟೈನ್‌ಮೆಂಟ್ ಹಾಗೂ ಬಫರ್ ವಲಯದ ನಿವಾಸಿಗಳು, ಕೋವಿಡ್ ಪೀಡಿತರ ಸಂಪರ್ಕಿತರು ಹಾಗೂ ಸೋಂಕಿನ ಲಕ್ಷಣಗಳು ಇರುವವರಿಗೆ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *