Connect with us

    KARNATAKA

    2 -3 ದಿನಗಳಲ್ಲಿ ಸಿಎಂ ಭೇಟಿ ಮಾಡಿದ ಎಲ್ಲರಿಗೂ ಕೊರೊನಾ ಪರೀಕ್ಷೆ

    ಬೆಂಗಳೂರು; ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೊಂಕು ತಗುಲಿರುವ ಹಿನ್ನಲೆ ಕಳೆದ 2-3 ದಿನಗಳಿಂದ ಸಿಎಂ ಅವರನ್ನು ಭೇಟಿ ಮಾಡಿದ ಎಲ್ಲರನ್ನೂ ಕೊರೊನಾ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.


    ಅಲ್ಲದೆ ಮುಖ್ಯಮಂತ್ರಿಗಳ ಪ್ರಯಾಣದ ಮಾಹಿತಿಯನ್ನು ಪರಿಶೀಲಿಸಲಾಗುವುದು ಎಂದು ಇಲಾಖೆ ತಿಳಿಸಿದೆ. ಕೆಲ ದಿನಗಳಿಂದ ಸಿಎಂ ಸಂಪರ್ಕಿಸಿದವರನ್ನು ಕ್ವಾರಂಟೈನ್ ಕೂಡಾ ಮಾಡಲಾಗಿದೆ. ಹೀಗಾಗಿ ಸಿಎಂ ಬಿಎಸ್ ವೈ ಅವರ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡಲಾಗುತ್ತಿದ್ದು, ಸಿಎಂ ಬಿಎಸ್ ವೈ ಅವರ ಕಳೆದ 2-3 ದಿನಗಳ ಎಲ್ಲ ಕಾರ್ಯಕ್ರಮಗಳು ಮತ್ತು ಅದರಲ್ಲಿ ಪಾಲ್ಗೊಂಡವರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಂತೆಯೇ ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಿ ಅವರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.


    ನಿನ್ನೆ ಕೋವಿಡ್-19 ಪರೀಕ್ಷೆಗೊಳಪಟ್ಟಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು, ಬಿಎಸ್ ವೈ ಮಾತ್ರವಲ್ಲದೇ ಅವರ ಪುತ್ರಿ ಪದ್ಮಾವತಿ ಅವರಿಗೂ ಪಾಸಿಟಿವ್ ಬಂದಿದ್ದು, ಇಬ್ಬರನ್ನೂ ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಸ್ತುತ ಇಬ್ಬರ ಆರೋಗ್ಯ ಸ್ಥಿರವಾಗಿದ್ದು, ಸಿಎಂ ಯಡಿಯೂರಪ್ಪನವರಿಗೆ ಯಾವುದೇ ಗುಣಲಕ್ಷಣ ಕಂಡು ಬಂದಿರಲಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಬಿಎಸ್ ವೈ ಪುತ್ರ ವಿಜಯೇಂದ್ರ ಅವರ ವರದಿ ನೆಗೆಟಿವ್ ಬಂದಿದೆ ಎನ್ನಲಾಗಿದೆ.

    ADVERTISEMENT

    Share Information
    Advertisement
    Click to comment

    You must be logged in to post a comment Login

    Leave a Reply