Connect with us

BELTHANGADI

ಚಿಂತಾಮಣಿಯಿಂದ ನಾಪತ್ತೆಯಾಗಿದ್ದ ದಂಪತಿಯ ಶವ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಪತ್ತೆ

ಬೆಳ್ತಂಗಡಿ ನವೆಂಬರ್ 03: ಚಿಂತಾಮಣಿಯಿಂದ ಅಕ್ಟೋಬರ್‌ 31 ರಂದು ಕಾಣೆಯಾಗಿದ್ದ ದಂಪತಿಗಳ ಶವ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಈಶ್ವರಮ್ಮ (52) ಎಂದು ಗುರುತಿಸಲಾಗಿದೆ. ಊರಿನಲ್ಲಿ ದಂಪತಿ ನಾಪತ್ತೆಯಾಗಿದ್ದು. ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ ಪೊಲೀಸರ ಸಹಕಾರದಲ್ಲಿ ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದ್ದರು.


ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್‌ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದು. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನವೆಂಬರ್ 1 ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *