LATEST NEWS
ಅನಾರೋಗ್ಯ ಹಿನ್ನಲೆ ಮನನೊಂದು ದಂಪತಿ ಆತ್ಮಹತ್ಯೆಗೆ ಶರಣು
ಉಡುಪಿ ಜೂನ್ 02: ಅನಾರೋಗ್ಯದ ಹಿನ್ನೆಲೆ ಮನನೊಂದು ಹಿರಿಯ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಕೆ.ಪಿ.ಅನಂತ ಪ್ರಭು ,ಪತ್ನಿ ಪದ್ಮಾ ಪ್ರಭು ಎಂದು ಗುರುತಿಸಲಾಗಿದೆ.
ಪದ್ಮಾ ಪ್ರಭು ಅನಾರೋಗ್ಯದಿಂದ ಬಳಲುತ್ತಿದ್ದರು, ಈ ಹಿನ್ನೆಲೆಯಲ್ಲಿ ಮನನೊಂದು ಪತಿ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದರು, ಇಬ್ಬರನ್ನೂ ಮಂಗಳೂರು ಕೆಎಂಸಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login