LATEST NEWS
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್ಪೆಕ್ಟರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಮಂಗಳೂರು ಅಗಸ್ಟ್ 27: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್ಪೆಕ್ಟರ್ ನ್ನು ಅಪರಾಧಿ ಎಂದು ಪರಿಗಣಿಸಿ ಮಂಗಳೂರು ಲೊಕಾಯುಕ್ತ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕರಾವಳಿ ಕಾವಲು ಪಡೆಯ ಇನ್ಸ್ಪೆಕ್ಟರ್ ಗಂಗಿರೆಡ್ಡಿ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ ಆರೋಪ ಹೊತ್ತಿದ್ದರು.
2009ರಲ್ಲಿ ಈ ಪ್ರಕರಣ ನಡೆದಿದ್ದು, ಕರಾವಳಿ ಕಾವಲು ಪಡೆಯ ಇನ್ಸಪೆಕ್ಟರ್ ಆಗಿದ್ದ ಗಂಗಿ ರೆಡ್ಡಿ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ ದಾಳಿ ನಡೆಸಿದ್ದರು. ಈ ಸಂದರ್ಭ ಹಲವಾರು ದಾಖಲೆಗಳನ್ನು ವಶ ಪಡಿಸಿಕೊಂಡಿದ್ದರು. ಸುಮಾರು 19 ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿ.ವೈ. ಎಸ್.ಪಿ. ಆಗಿದ್ದ ಎಮ್. ವಿಟ್ಟಲ್ ದಾಸ್ ಪೈ ಆರೋಪಿ ಗಂಗಿ ರೆಡ್ಡಿ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಿಸಿದೆ.
ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರಿಂದ ಶಿಕ್ಷೆ ಪ್ರಕಟಿಸಿದ್ದು, ನ್ಯಾಯಾಧೀಶ ರಿಂದ 111 ಪುಟಗಳ ಸುದೀರ್ಘ ಆದೇಶದನ್ವಯ ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಅಡಿ ಯಲ್ಲಿ ಆರೋಪಿ ಗಂಗಿ ರೆಡ್ಡಿ ಅಪರಾಧ ಎಸಗಿದ್ದಾರೆಂದು ಸಾಭೀತಾಗಿದ್ದು, ಆಪರಾಧಿಗೆ 4 ವರ್ಷ ಸಾದಾ ಸಜೆ ಮತ್ತು ರೂ 5,00,000 ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ಎಂದು ಘೋಷಿಸಿದ್ದಾರೆ.
You must be logged in to post a comment Login