LATEST NEWS
ಅಕ್ರಮ ಕಸಾಯಿಖಾನೆಯ ಆಸ್ತಿ ಮುಟ್ಟುಗೋಲು..!!
ಮಂಗಳೂರು ಅಕ್ಟೋಬರ್ 27: ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡಿದ್ದು. ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಯೋಗಿ ಮಾದರಿ ಪ್ರಯೋಗ ಮಾಡಲಾಗಿದೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮೂರು ಅಕ್ರಮ ಕಸಾಯಿಖಾನೆಗಳನ್ನು ಅಧಿಕೃತವಾಗಿ ಕಂದಾಯ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಅಡಿಯಲ್ಲಿ ಮುಟ್ಟುಗೋಲು ಹಾಕಲಾಗಿದೆ.
ಅಧಿಕೃತವಾಗಿ ಅಕ್ರಮ ಕಸಾಯಿಖಾನೆಯ ಜಾಗಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಅಕ್ರಮ ಕಸಾಯಿಖಾನೆ ಜಾಗ ವಶಕ್ಕೆ ಪಡೆದು ಸರ್ಕಾರದ ಹೆಸರಲ್ಲಿ ಆರ್.ಟಿ.ಸಿ ನೋಂದಾಣಿ ಮಾಡಲಾಗಿದ್ದು, ಕಾಟಿಪಳ್ಳ, ಅರ್ಕುಳ ಮತ್ತು ಗಂಜಿ ಮಠದಲ್ಲಿ ಅಕ್ರಮ ಕಸಾಯಿಖಾನೆ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.
You must be logged in to post a comment Login