Connect with us

LATEST NEWS

ಕುಂದಾಪುರ – ಕಮಲಶಿಲೆ ದೇವಸ್ಥಾನದ ಗೋಶಾಲೆಯಿಂದ ಗೋಕಳ್ಳತನಕ್ಕೆ ಯತ್ನ

ಕುಂದಾಪುರ ಜೂನ್ 17: ರಸ್ತೆ ಬದಿ ಬೀಡಾಡಿ ದನಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು ಇದೀಗ ದೇವಸ್ಥಾನಕ್ಕೆ ನುಗ್ಗಿ ದನಗಳನ್ನು ಕಳ್ಳತನ ಮಾಡುವ ಹಂತಕ್ಕೆ ಹೋಗಿದ್ದು, ಕುಂದಾಪುರದ ಕಮಲಶಿಲೆ ದೇವಸ್ಥಾನ ಗೋಶಾಲೆ ನುಗ್ಗಿ ಗೋಕಳ್ಳತನಕ್ಕೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.


ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ವೇಳೆಗೆ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಬದಿಯ ಬಾಗಿಲ ಮೂಲಕ ಒಳ ನುಗ್ಗಿದ್ದಾರೆ. ಬಳಿಕ 3 ಗೋವು ಗಳ ಹಗ್ಗವನ್ನು ಕತ್ತಿಯಿಂದ ತುಂಡರಿಸಿ ಸಾಗಾಟಕ್ಕೆ ಯತ್ನಿಸಿದ್ದರು.
ಕಮಲಶಿಲೆ ದೇವಸ್ಥಾನದಲ್ಲಿ ಸೈನ್‌ ಇನ್‌ ಸೆಕ್ಯುರಿಟೀಸ್‌ ಸಂಸ್ಥೆಯ ಲೈವ್‌ ಮಾನಿಟರಿಂಗ್‌ ಸಿಸಿಟಿವಿ ಹಾಕಿಸಲಾಗಿದೆ. ಈ ಸಂಸ್ಥೆ 24 ತಾಸು ಸಿಸಿಟಿವಿ ಮೇಲೆ ನೇರ ನಿಗಾ ಇಟ್ಟು ಪೊಲೀಸ್‌ ಇಲಾಖೆಗೆ ಇಂತಹ ಕಳ್ಳತನ, ಅನುಮಾನಾಸ್ಪದ ವ್ಯಕ್ತಿಗಳ ಓಡಾಟ, ಸಂಶಯಾಸ್ಪದ ಚಟುವಟಿಕೆಗಳ ಮಾಹಿತಿಯನ್ನು ಕೂಡಲೇ ರವಾನಿಸುತ್ತದೆ. ಹೀಗೆ ಗೋ ಕಳ್ಳತನ ನಡೆಯುವ ರಾತ್ರಿ ಸೈನ್‌ ಇನ್‌ ಸಿಸಿಟಿವಿ ತಂಡ ಕಳ್ಳತನದ ಮಾಹಿತಿಯನ್ನು ಬೀಟ್‌ ಪೊಲೀಸ್‌, ಎಸ್‌ಐ, ದೇವಾಲಯದ ಭದ್ರತಾ ವಿಭಾಗದವರಿಗೆ ರವಾನಿಸಿದೆ.

ಭದ್ರತಾ ವಿಭಾಗ ದವರು ಕೂಡಲೇ ಗೋಶಾಲೆಗೆ ತೆರಳಿದ್ದು, ಆ ವೇಳೆಗೆ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದರು. ನಾಪತ್ತೆ ಯಾಗಿದ್ದ ಒಂದು ದನ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಉಳಿದೆಲ್ಲಾ ಗೋಗಳು ದೇವಸ್ಥಾನದಲ್ಲೇ ಸುರಕ್ಷಿತವಾಗಿದ್ದವು. ಇನ್ನು ಎಸ್‌ಐ ಹಾಗೂ ಕುಂದಾಪುರ ಡಿವೈಎಸ್‌ಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *