Connect with us

LATEST NEWS

ದನ ಕಳ್ಳತನ ಮಾಡಿದವರು ಹುಚ್ಚರಂತೆ ತಿರುಗಾಡಬೇಕು – ದೇವರ ಮೊರೆ ಹೋದ ಗ್ರಾಮಸ್ಥರು

ದನ ಕಳ್ಳತನ ಮಾಡಿದವರು ಹುಚ್ಚರಂತೆ ತಿರುಗಾಡಬೇಕು – ದೇವರ ಮೊರೆ ಹೋದ ಗ್ರಾಮಸ್ಥರು

ಮೂಡಬಿದಿರೆ ಫೆಬ್ರವರಿ 19: ದನ ಕಳ್ಳರ ಹಾವಳಿಯಿಂದ ರೋಸಿ ಹೋಗಿರುವ ಮಾಂಟ್ರಾಡಿ ಗ್ರಾಮದ ಪೆಂಚಾರಿನ ಗ್ರಾಮಸ್ಥರೊಬ್ಬರು ದೈವ, ದೇವರಿಗೆ ಮೊರೆ ಹೋಗಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪರಿಸರಗಳಲ್ಲಿ ದನ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಮೇವಿಗೆಂದು‌ ಹೊರಟ ದನಗಳು ಮನೆ ಸೇರದೆ ಕಳ್ಳಕಾಕರ ಕೈಗೆ ಸಿಕ್ಕಿ ಕಸಾಯಿಖಾನೆ ಸೇರುತ್ತಿದೆ. ಹಲವು ಪೋಲೀಸ್‌ ದೂರುಗಳು ದಾಖಲಾದರೂ ದನ ಕಳೆದುಕೊಂಡವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಸಾಲ ಮಾಡಿ ದನ ಖರೀದಿಸಿ ಜೀವನ ಸಾಗಿಸುತ್ತಿರುವ ಬಡ ಕುಟುಂಬದ ದನಗಳನ್ನು ಕಳ್ಳತನ ಮಾಡುತ್ತಿರುವುದು ಹೆಚ್ಚಾಗಲಾರಂಭಿಸಿದೆ.

ದನ‌ಕಳ್ಳರ ಕಾಟ ತಡೆಯಲಾರದೆ ಜಿಲ್ಲೆಯ ಜನ ದೈವ-ದೇವರುಗಳ ಮೊರೆ ಹೋಗಿದ್ದಾರೆ‌. ದನ ಕಳ್ಳರ ಮೇಲೆ ಧರ್ಮಸ್ಥಳ, ಪಣೊಲಿಬೈಲು,ಮಾರಣಬೆಟ್ಟು, ಕೊರಗಜ್ಜ ಮೊದಲಾದ ದೈವಗಳಿಗೆ‌ ಹರಕೆ ಹೊರಲಾಂಭಿಸಿದ್ದಾರೆ. ದನ ಕಳ್ಳತನ ಮಾಡಿದವರು ಹುಚ್ಚರಂತೆ ತಿರುಗಾಡಬೇಕು ಎಂದು ಜನ ಇದೀಗ ದೈವ-ದೇವರಲ್ಲಿ ಮೊರೆ ಹೊತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *