LATEST NEWS
ಬಿಜೆಪಿ ಸಿಪಿಐಎಂ ಕಾರ್ಯಕರ್ತರ ನಡುವೆ ವಾಗ್ವಾದ
ಬಿಜೆಪಿ ಸಿಪಿಐಎಂ ಕಾರ್ಯಕರ್ತರ ನಡುವೆ ವಾಗ್ವಾದ
ಮಂಗಳೂರು ಎಪ್ರಿಲ್ 28: ಸಿಪಿಐಎಂ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಿಪಿಐಎಂ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ನಡೆಸುತ್ತಿದ್ದ ಸಂದರ್ಭ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರಿನ ಯೆಯ್ಯಾಡಿ ಬಳಿ ಮಂಗಳೂರು ದಕ್ಷಿಣ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಸುನಿಲ್ ಕುಮಾರ್ ಬಜಾಲ್ ಪರವಾಗಿ ಮತಯಾಚನೆ ನಡೀತಿತ್ತು. ಈ ವೇಳೆ, ಬಿಜೆಪಿ ಕಾರ್ಯಕರ್ತರು ಎದುರಾಗಿದ್ದು ಕೆಂಪು ಶರ್ಟ್ ಧರಿಸಿದ್ದ ಕಮ್ಯುನಿಸ್ಟ್ ಕಾರ್ಯಕರ್ತರನ್ನು ನೋಡಿ ಮೋದಿ ಮೋದಿಯೆಂದು ಕೂಗತೊಡಗಿದರು. ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು ಕಾವೂರು ಠಾಣೆ ಪೊಲೀಸರು ಕೂಡಲೇ ಉದ್ರಿಕ್ತರನ್ನು ಚದುರಿಸಿದರು.
You must be logged in to post a comment Login