DAKSHINA KANNADA
ಚುನಾವಣಾ ಪ್ರಚಾರ ವೇಳೆ ಸಿಪಿಎಂ ಗೂಂಡಾಗಳಿಂದ ಕಿರುಕುಳ – ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಆರೋಪ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕಾಸರಗೋಡು ಎಪ್ರಿಲ್ 22: ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಅವರ ಪ್ರಚಾರ ವಾಹನಕ್ಕೆ ಸಿಪಿಎಂ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ಪಡಣ್ಣ ಕಡಪ್ಪುರಂನಲ್ಲಿ ನಡೆದಿದ್ದು, ಘಟನೆ ಕುರಿತು ಬಿಜೆಪಿ ಅಭ್ಯರ್ಥಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದು, ಸೋಲಿನ ಭೀತಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತ್ರಿಕರಿಪುರ ಮಂಡಲದ ವಲಿಯಪರಂಬ, ಪಡಣ್ಣ ಕಡಪ್ಪುರಂನಲ್ಲಿ ಬಿಜೆಪಿ ಪ್ರಚಾರದ ವಾಹನವನ್ನು ಸಿಪಿಎಂ ಕಾರ್ಯಕರ್ತರು ತಡೆದು ಪ್ರಚಾರ ಮಾಡದಂತೆ ತಡೆದಿದ್ದಾರೆ. ಈ ಕುರಿತಂತೆ ಮಾತನಾಡಿದರುವ ಬಿಜೆಪಿ ಅಭ್ಯರ್ಥಿ ಅಶ್ವಿನಿ ಸಿಪಿಎಂ ಕಾರ್ಯಕರ್ತರು ವಾಹನವನ್ನು ತಡೆದು ನಿಲ್ಲಿಸಿದ್ದಲ್ಲದೆ ಸಿಪಿಎಂ ಕಾರ್ಯಕರ್ತರು ನನ್ನ ಪಿಎ ಹತ್ತಿರ ನನ್ನ ವಿರುದ್ದ ಅಸಭ್ಯ ಪದಗಳನ್ನು ಬಳಸಿ ಮಾತನಾಡಿದ್ದಾನೆ. ಅಲ್ಲದೆ ಪ್ರಚಾರ ಮಾಡದಂತೆ ತಡೆದಿದ್ದಾರೆ ಎಂದು ಆರೋಪಿಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ನನ್ನ ಪ್ರಚಾರವನ್ನು ಅಡ್ಡಿಪಡಿಸುವ ಮತ್ತು ನಮ್ಮ ಧ್ವನಿಯನ್ನು ಮೌನಗೊಳಿಸುವ ಈ ಹೇಡಿತನದ ಪ್ರಯತ್ನದ ಹೊರತಾಗಿಯೂ, ನಮ್ಮ ಚುನಾವಣಾ ಪ್ರಚಾರವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೆ ಎಲ್ಲಿ ಬೇಕಾದರೂ ಮತ ಕೇಳುವ ಹಕ್ಕಿದೆ ಮತ್ತು ಆ ಹಕ್ಕನ್ನು ಹತ್ತಿಕ್ಕುವ ಯಾವುದೇ ಪ್ರಯತ್ನಗಳ ವಿರುದ್ಧ ನಾವು ಹೋರಾಡುತ್ತೇವೆ ಎಂದ ಅವರು ನಾನು ಗೆಲುವ ಸಾಧಿಸುತ್ತೇನೆ ಎಂಬ ಹಿನ್ನಲೆ ನನ್ನ ಮೇಲೆ ದಾಳಿ ಮಾಡಲು ಯತ್ನಿಸಿದ್ದು, ಮಹಿಳೆಯಾಗಿ ನಾನು ಈ ಎಲ್ಲಾ ಅಡೆತಡೆಗಳನ್ನು ಎದುರಿಸಲು ಸಿದ್ದ ಎಂದು ಹೇಳಿದರು.
You must be logged in to post a comment Login