Connect with us

    DAKSHINA KANNADA

    ವೇಣೂರು ಪಟಾಕಿ ಗೋಡೌನ್ ಸ್ಪೋಟ ಪ್ರಕರಣ – ನಾಲ್ಕನೇ ಆರೋಪಿ ಅರೆಸ್ಟ್

    ಬೆಳ್ತಂಗಡಿ ಫೆಬ್ರವರಿ 06: ವೇಣೂರು ಪಟಾಕಿ ಗೋಡೌನ್ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


    ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿಯಾದ ಅನಿಲ್.ಎಂ ಡೇವಿಡ್ (49) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಅನಿಲ್ ​ಹೆಚ್ಚಿನ ಪಟಾಕಿ ರಾಸಾಯನಿಕ ಸರಬರಾಜು ಮಾಡುತ್ತಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಇದರೊಂದಿಗೆ ಈ ಸ್ಪೋಟ ಪ್ರಕರಣಕ್ಕೆ ಸಂಬಂಧಿಸದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೇ ಏರಿಕೆಯಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜನವರಿ 28ರ ಸಂಜೆ 5.30 ಸುಮಾರಿಗೆ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟವಾಗಿತ್ತು. ಈ ಸ್ಪೋಟದಲ್ಲಿ ಮೂವರು ಕಾರ್ಮಿಕರು ಸಾವನಪ್ಪಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply