DAKSHINA KANNADA
ಕರಾವಳಿಯಲ್ಲಿ ಕ್ರಿಕೆಟಿಗ ಕೆ. ಎಲ್. ರಾಹುಲ್ ರಿಂದ ಟೆಂಪಲ್ ರನ್..! ಕುಕ್ಕೆ, ಸೌತಡ್ಕ, ಧರ್ಮಸ್ಥಳಗಳಿಗೆ ಭೇಟಿ..!
ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದ ರಾಹುಲ್ ಬುಧವಾರ ಕುಕ್ಕೆ ಸುಬ್ರಹ್ಮಣ್ಯ, ಬಯಲು ಕ್ಷೇತ್ರ ಸೌತಡ್ಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವೀಶೆಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕಾರ ಮಾಡಿದರು.
ಸುಬ್ರಹ್ಮಣ್ಯದಲ್ಲಿ ದೇವಳದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿ, ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ವೇಳೆ ಬಯಲು ಆಲಯ ಗಣಪ ಕ್ಷೇತ್ರ ಬೆಳ್ತಂಗಡಿ ತಾಲೂಕಿನ ಸೌತಡ್ಕಕ್ಕೂ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ ನೀಡಿದರು. ಬಯಲು ಆಲಯ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಸಮಿತಿಯಿಂದ ಕ್ರಿಕೆಟಿಗ ಕೆ ಎಲ್ ರಾಹುಲ್ ಅವರನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹಾಗೂ ಅರ್ಚಕರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಭೇಟಿ ನೀಡಿದ ರಾಹುಲ್ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು .
ಮೂಲತಾ ಮಂಗಳೂರಿನವರಾದ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮಾನಕರವಾಗಿತ್ತು. ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಅದ್ಭುತ ಕಮಾಲ್ ಮಾಡಿದ್ದರು. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಲ್ಲಿ ಟೆಂಪಲ್ ರನ್ ನಡೆಸಿ ದೇವರ ದರ್ಶನ ಪಡೆದಿದ್ದಾರೆ.
You must be logged in to post a comment Login