Connect with us

    LATEST NEWS

    ಮಂಗಳೂರಿಗೆ ಭೇಟಿ ನೀಡಿದ ಕ್ರಿಕೆಟಿಗ ಶಿವಂ ದುಬೆ

    ಮಂಗಳೂರು, ಅಕ್ಟೋಬರ್ 12: ಮಂಗಳೂರಿಗೆ ಭಾರತೀಯ ಕ್ರಿಕೆಟ್ ತಂಡದ ಸದಸ್ಯ  ಶಿವಂ ದುಬೆ ಭೇಟಿ ನೀಡಿದ್ದಾರೆ.

    ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಕ್ರಿಕೆಟಿಗ ಶಿವಂ ದುಬೆ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ಶಿವಂ ಅವರನ್ನು ದೇವರ ಶೇಷ ವಸ್ತ್ರ , ಪ್ರಸಾದ ನೀಡಿ ಗೌರವಿಸಲಾಯಿತು

    ಈ ಸಂದರ್ಭ ದೇವಳದ ಅರ್ಚಕರು, ಆಡಳಿತ ಮಂಡಳಿಯವರು ಅಭಿಮಾನಿಗಳು ಉಪಸ್ಥಿತರಿದ್ದರು, ಶಿವಂ ದುಬೆ ಯವರು ಮಂಗಳೂರಿನ‌ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿರುವ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಇಂದು ಸಂಜೆ ಭಾಗವಹಿಸಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply