Connect with us

    LATEST NEWS

    ಶುಕ್ರವಾರದ ನಮಾಜ್‌ಗಾಗಿ ಮಂಗಳೂರಿನಲ್ಲಿ ಮಧ್ಯಾಹ್ನ 12 ರಿಂದ 2 ರವರೆಗೆ ಕರ್ಪ್ಯೂ ಸಡಿಲಿಕೆ

    ಶುಕ್ರವಾರದ ನಮಾಜ್‌ಗಾಗಿ ಮಂಗಳೂರಿನಲ್ಲಿ ಮಧ್ಯಾಹ್ನ 12 ರಿಂದ 2 ರವರೆಗೆ ಕರ್ಪ್ಯೂ ಸಡಿಲಿಕೆ

    ಮಂಗಳೂರು ಡಿಸೆಂಬರ್ 20: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಪ್ಯೂ ಹಿನ್ನಲೆ  ಶುಕ್ರವಾರದ ನಮಾಜ್‌ಗಾಗಿ ನಗರದಲ್ಲಿ ಮಧ್ಯಾಹ್ನ 12ರಿಂದ 2ರವರೆಗೆ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿನ್ನೆ ಘರ್ಷಣೆ ಮೃತಪಟ್ಟವರ ಶವಪರೀಕ್ಷೆ ಆರಂಭವಾಗಿದೆ. ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್, ಪೊಲೀಸ್ ಕಮಿಷನರ್ ಹರ್ಷ ನೇತೃತ್ವದಲ್ಲಿ ಶವಪರೀಕ್ಷೆ ನಡೆಯುತ್ತಿದೆ.

    ಶವಾಗಾರದ ರಸ್ತೆಯನ್ನು ಪೊಲೀಸರು ಸಂಚಾರ ನಿರ್ಬಂಧ ವಿಧಿಸಿದ್ದಾರೆ. ಮಾಜಿ ಸಚಿವ ಯು.ಟಿ.ಖಾದರ್, ಮಾಜಿ ಶಾಸಕ ಮೊಹಿದ್ದೀನ್ ಸೇರಿ ಹಲವು ನಾಯಕರು ಈಗಾಗಲೇ ಆಸ್ಪತ್ರೆ ಆವರಣಕ್ಕೆ ಬಂದಿದ್ದಾರೆ.

    ಮೃತರ ಕುಟುಂಬದವರು ದಕ್ಷಿಣ ಕನ್ನಡ ಸೆಂಟ್ರಲ್ ಮುಸ್ಲಿಂ ಕಮಿಟಿ ನಾಯಕರೊಂದಿಗೆ ಮರಣೋತ್ತರ ಪರೀಕ್ಷೆಗೆ ಬಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply