Connect with us

LATEST NEWS

ಸೈಕಲ್ ಸ್ಕಿಡ್ ಆಗಿ ಬಿದ್ದು 8 ನೇ ತರಗತಿ ವಿಧ್ಯಾರ್ಥಿ ಸಾವು

ಕುಂದಾಪುರ – ಸೈಕಲ್ ಸ್ಕಿಡ್ ಆಗಿ ಬಿದ್ದು ಬಾಲಕನೊರ್ವ ಸಾವನಪ್ಪಿರುವ ಘಟನೆ ಹೆಬ್ರಿಯ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ ವಿದ್ಯಾರ್ಥಿ ಶ್ರೇಯಸ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಸಾಂಧರ್ಭಿಕ ಚಿತ್ರ

ಹರಿಖಂಡಿಗೆ ಕಂಚಿಗುಂಡಿಯಿಂದ ಸೈಕಲ್ ನಲ್ಲಿ ಹೋಗುತ್ತಿರುವಾಗ ಸೈಕಲ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಕವುಚಿ ಬಿದ್ದ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶ್ರೇಯಸ್, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *