Connect with us

    MANGALORE

    ತುಳು ಭಾಷೆಗೆ ರಾಷ್ಟ್ರೀಯ ಮಾನ್ಯತೆಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ

    ತುಳು ಭಾಷೆಗೆ ರಾಷ್ಟ್ರೀಯ ಮಾನ್ಯತೆಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ

    ಮಂಗಳೂರು ಎಪ್ರಿಲ್ 9: ಮಂಗಳೂರಿನ ಯುವಕನೋರ್ವ ತುಳು ಬಾಷೆಗೆ ರಾಷ್ಟ್ರೀಯ ಮಾನ್ಯತೆ ದೊರಕಲು ಕಾಶ್ಮೀರದಿಂದ ಕನ್ಯಾಕುಮಾರಿ ತನಕ ತುಳುನಾಡಿನ ಧ್ವಜ ಸೈಕಲ್ ಸವಾರಿ ಮಾಡಿದ್ದಾರೆ.

    ಮಂಗಳೂರು ತಾಲೂಕಿನ ನೆಲ್ಲಿಕಾರು ಪ್ರದೇಶದ ಪ್ರಸಾದ್ ವಿಜಯ ಶೆಟ್ಟಿ ಎಂಬುವರೇ ಈ ಸಾಧನೆ ಮಾಡಿದ ಯುವಕ. 26 ವರ್ಷದ ವಿಜಯ ಶೆಟ್ಟಿ ಕಳೆದ 19 ದಿನಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ತುಳುನಾಡಿನ ಧ್ವಜ ಪ್ರದರ್ಶಿಸುತ್ತಾ ಸೈಕಲ್ ಸವಾರಿ ಮಾಡಿದ್ದಾರೆ. ವಿಜಯ್ ಶೆಟ್ಟಿ ಎಪ್ರಿಲ್ 8 ರಂದು ಮಂಗಳೂರು ತಲುಪಿದ ಸಂದರ್ದಲ್ಲಿ, ತುಳು ಅಕಾಡೆಮಿ ತುಳುಭವನದಲ್ಲಿ ಅಕಾಡೆಮಿಯ ವತಿಯಿಂದ ಸಾಂಪ್ರಾದಾಯಕವಾಗಿ ಸ್ವಾಗತಿಸಿ ವಿಜಯ್ ಶೆಟ್ಟಿಯನ್ನು ಅಭಿನಂದಿಸಿದರು.

    2500 ವರ್ಷಗಳ ಇತಿಹಾಸ ಹೊಂದಿರುವ ತುಳು ಭಾಷೆಗೆ ದೇಶದ ಸಂವಿಧಾನದಲ್ಲಿ ಮಾನ್ಯತೆ ದೊರಕಿಲ್ಲ. ಇತ್ತಿಚೆಗಿನ ದಿನಗಳಲ್ಲಿ ಸಾಂವಿಧಾನಿಕ ಮಾನ್ಯತೆಗಾಗಿ ವಿವಿಧ ರೀತಿಯಲ್ಲಿ ಒತ್ತಡ ಹಾಕಲಾಗುತ್ತಿದೆ. ತುಳುನಾಡಿನ ಜನತೆ ವಿಭಿನ್ನ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಿ ಭಾಷಾ ಮಾನ್ಯತೆಗಾಗಿ ಶ್ರಮಿಸುತ್ತಿದ್ದಾರೆ.

    ಯುವಕರು, ಸಾಹಿತಿಗಳು, ಸಂಘಟಕರು, ಹೋರಾಟಗಾರರು ತಮ್ಮದೇ ಆದ ರೀತಿಯಲ್ಲಿ ತುಳುನಾಡಿನ ಸ್ವಾಭಿಮಾನ ರಕ್ಷಣೆ ಮಾಡುತ್ತಿದ್ದಾರೆ. ಅಕಾಡೆಮಿ ವತಿಯಿಂದ ಕಾನೂನಿನ ಚೌಕಟ್ಟಿಗೆ ಒಳಪಟ್ಟು ಸಹಕಾರ ನೀಡಲಾಗುತ್ತಿದೆ. ಎಲ್ಲರೂ ಒಂದಾಗಿ ಒಂದೇ ಉದ್ದೇಶಕ್ಕೆ ಚಳವಳಿ ನಡೆಸಿದಾಗ ಯಶಸ್ಸು ಸಿಗಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿ ಪ್ರಯತ್ನಿಸುತ್ತಿದೆ ಎಂದು ಎ.ಸಿ ಭಂಡಾರಿ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply