LATEST NEWS
ಬಂಗಾಳಕೊಲ್ಲಿಯಲ್ಲಿ ಅಂಪಾನ್ ಚಂಡಮಾರುತ – ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ಅಂಪಾನ್ ಚಂಡಮಾರುತ – ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಮಂಗಳೂರು ಮೇ.3: ಬಂಗಾಳ ಕೊಲ್ಲಿಯ ಅಂಡಮಾನ್ ದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಚಂಡಮಾರುತದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪದ ಬಳಿ ವಾಯುಬಾರ ಕುಸಿತ ಉಂಟಾಗಿದ್ದು, ಇದು ಸದ್ಯದಲ್ಲೇ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾದ್ಯತೆ ಇದ್ದು, ಈ ಚಂಡಮಾರುತಕ್ಕೆ ಅಂಫಾನ್ ಎಂದು ಹೆಸರಿಡಲಾಗಿದೆ. ಇದು ಪ್ರಸ್ತುತ ಋತುವಿನ ಮೊದಲ ಚಂಡ ಮಾರುತವಾಗಲಿದೆ.
ವಾಯುಭಾರ ಕುಸಿತದಿಂದ ಬಂಗಾಳ ಕೊಲ್ಲಿಯ ಆಗ್ನೇಯ ಭಾಗ, ಅಂಡಮಾನ್, ನಿಕೋಬಾರ್ ದ್ವೀಪ ಹಾಗೂ ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರಿ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಅಂಡಮಾನ್ ದ್ವೀಪದ ಬಳಿ ಪ್ರಸ್ತುತ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಕುರಿತು ಮುಂದಿನ 24 ತಾಸುಗಳಲ್ಲಿ ಉಂಟಾಗುವ ಹವಾಮಾನ ಬದಲಾವಣೆಯಲ್ಲಿ ತಿಳಿದು ಬರಲಿದೆ. ಇದರಿಂದ ಕರ್ನಾಟಕದ ಕರಾವಳಿ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಗಳು ಬಹಳ ಕಡಿಮೆ.
ರಾಜ್ಯದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ.ಸಿ.ಎನ್. ಪ್ರಭು ತಿಳಿಸಿದ್ದಾರೆ.
You must be logged in to post a comment Login