Connect with us

LATEST NEWS

ಮಧುರೈ ರೈಲಿನಲ್ಲಿ ಸಿಲಿಂಡರ್ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ

ಧುರೈ, ಆಗಸ್ಟ್ 26: ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ರೈಲಿನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಈ ಅವಘಡ ನಡೆದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ ಪ್ರಯಾಣಿಕರು ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್‌ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಮೃತರನ್ನು ಉತ್ತರ ಪ್ರದೇಶದವರು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *