Connect with us

    LATEST NEWS

    ನಿಗೂಢವಾಗಿ ನಾಪತ್ತೆಯಾದ ತಂದೆ ಮಗ, ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಶಂಕೆ…..?

    ನಿಗೂಢವಾಗಿ ನಾಪತ್ತೆಯಾದ ತಂದೆ ಮಗ, ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಶಂಕೆ…..?

    ಮಂಗಳೂರು ಫೆಬ್ರವರಿ 16: ಮಂಗಳೂರಿನ ಉಳ್ಳಾಲ ಸೇತುವೆ ಬಳಿ ತಂದೆ ಮಗ ನಿಗೂಢವಾಗಿ ನಾಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

    ನಾಪತ್ತೆಯಾಗಿರುವವರನ್ನು ಗೋಪಾಲಕೃಷ್ಣ ರೈ(45) ಮತ್ತು ನಮೀಶ್ ರೈ(6) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ನಿವಾಸಿಗಳೆಂದು ಹೇಳಲಾಗಿದೆ. ಸದ್ಯ ಮುಂಬೈಯಲ್ಲಿ ನೆಲೆಸಿರುವ ಗೋಪಾಲಕೃಷ್ಣ ರೈ ಕೊಣಾಜೆಯ ಪಾವೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ನಡೆಯುವ ನೇಮೋತ್ಸವಕ್ಕಾಗಿ ಎರಡು ದಿನಗಳ ಹಿಂದೆ ಪತ್ನಿ, ಮಗನ ಜೊತೆ ಆಗಮಿಸಿದ್ದರೆನ್ನಲಾಗಿದೆ.

    ಆದರೆ ಕಳೆದ ರಾತ್ರಿ ಎರಡು ಗಂಟೆ ಸುಮಾರಿಗೆ ಗೋಪಾಲಕೃಷ್ಣ ರೈ ಪುತ್ರ ನಮೀಶ್ ಜೊತೆ ಕಾರಿನಲ್ಲಿ ಮನೆಯಿಂದ ಹೊರಟಿದ್ದರೆನ್ನಲಾಗಿದೆ.
    ಆದರೆ ಇಂದು ಬೆಳಗ್ಗಿನ ಜಾವ ಅವರ ಕಾರು ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಪತ್ತೆಯಾಗಿದೆ. ಮಹಾರಾಷ್ಟ್ರ ನೋಂದಣಿಯ ಈ ಕಾರಿನಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಗಮನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇವರಿಬ್ಬರು ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಹುಡುಕಾಟ ಮುಂದುವರಿದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply