LATEST NEWS
ಉಡುಪಿ – ಸುರಿಯುತ್ತಿರುವ ಮಳೆಯಲ್ಲೂ ದೈವ ನರ್ತನ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ, ಮೇ.20: ಕರಾವಳಿಯಲ್ಲಿ ಮುಂಗಾರು ಪೂರ್ವದ ಮಳೆ ಸುರಿಯುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಇನ್ನೂ ಕರಾವಳಿಯ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ನಡೆದ ದೈವ ಕೋಲದ ಸೇವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಡುಪಿಯ ಅಲೆವೂರಿನಲ್ಲಿ ಮಳೆ ಸುರಿಯುತ್ತಿದ್ದರೂ ಬಬ್ಬುಸ್ವಾಮಿ ದೈವದ ಕೋಲ ನಡೆದಿದೆ. ನೇಮೋತ್ಸವ ಆರಂಭವಾಗುತ್ತಲೇ ಮಳೆ ಜೋರಾಗಿದ್ದು ಮಳೆ ನಡುವೆಯೇ ದೈವ ನರ್ತಕರು ನರ್ತನ ಕೋಲ ಸೇವೆ ಮಾಡಿದ್ದಾರೆ. ಜೋರಾಗಿ ಮಳೆ ಸುರಿದರೂ ನರ್ತನ ನಿಲ್ಲಿಸಿಲ್ಲ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಳೆ ಬಂದರೂ ದೈವ ನರ್ತಕ ಕೋಲ ಸೇವೆಯನ್ನು ನಿಲ್ಲಿಸದೆ ಮುಂದುವರೆಸಿದ್ದು ಈ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login