Connect with us

    DAKSHINA KANNADA

    ದ.ಕ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಜಿಲ್ಲಾ ಬಿಜೆಪಿ ನಿಯೋಗ, ರಾಜ್ಯಪಾಲರಿಗಾದ ಅವಮಾನ,ಕಾಂಗ್ರೆಸ್  ನಡೆಸಿದ್ದ ಕಾನೂನು ಬಾಹಿರ ಪ್ರತಿಭಟನೆ ಬಗ್ಗೆ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

    ಮಂಗಳೂರು  : ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ ನೇತೃತ್ವದ ನಿಯೋಗ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೇಸ್ಸಿಗರಿಂದ ರಾಜ್ಯಪಾಲರಿಗೆ ಆದ ಅವಮಾನ ಹಾಗೂ ಕಾನೂನು ಕೈಗೆತ್ತಿಕೊಂಡು  ಕಾಂಗ್ರೆಸ್  ನಡೆಸಿದ್ದ ಪ್ರತಿಭಟನೆ ಬಗ್ಗೆ ಮಾತನಾಡಿ ಕಾಂಗ್ರೇಸ್ ಮುಖಂಡರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ ಪತ್ರವನ್ನು ಸಲ್ಲಿಸಲಾಯಿತು.

    ಈ ನಿಯೋಗದಲ್ಲಿ ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್, ಪ್ರಧಾನ ಕಾರ್ಯದರ್ಶಿಯವರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮಾಜಿ ಶಾಸಕ ಸಂಜೀವ ಮಠಂದೂರು ಹಾಗು ಅಂಗಾರ, ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಕಾರ್ಪೋರೇಟರ್ ತಿಲಕ್ ರಾಜ್, ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜೋಯ್ಲಸ್, ಬಿಜೆಪಿ ವಕ್ತಾರ ಅರುಣ್ ಜಿ. ಶೇಟ್ ಮುಂತಾದವರು ಉಪತ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply