KARNATAKA
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ಐ ಅರ್ಜುನ್ ಸಸ್ಪೆಂಡ್
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ.
ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು, ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆ ಸಂಭವಿಸಿತ್ತು. ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿದ್ದರು.
ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
You must be logged in to post a comment Login