LATEST NEWS
ಪಾಕಿಸ್ತಾನ ನೆಲದಲ್ಲಿ ಕೇಸರಿ ಧ್ವಜ ಹಿಡಿದು ಜೈ ಶ್ರೀ ರಾಮ್ ಎಂದ ಮಾಜಿ ಕ್ರಿಕೆಟಿಗ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಪಾಕಿಸ್ತಾನ ಜನವರಿ 16: ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಇಡೀ ವಿಶ್ವವೇ ಎದುರು ನೋಡುತ್ತಿದ್ದು, ಇದೀಗ ಪಾಕಿಸ್ತಾನದಲ್ಲೂ ರಾಮಮಂದಿರದ ಬಗ್ಗೆ ಜನರು ಉತ್ಸುಕರಾಗಿದ್ದು, ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಪಾಕಿಸ್ತಾನದ ನೆಲದಲ್ಲೇ ಕೇಸರಿ ದ್ವಜ ಹಿಡಿದು ಜೈಶ್ರೀರಾಮ್ ಅಂದಿದ್ದಾರೆ.
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಕೂಡ ಈ ಅದ್ಧೂರಿ ಆಚರಣೆಯ ಬಗ್ಗೆ ತುಂಬಾ ಉತ್ಸುಕರಾಗಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಈ ಪೋಸ್ಟ್ನಲ್ಲಿ, ಪಾಕಿಸ್ತಾನದ ಮಾಜಿ ಸ್ಪಿನ್ನರ್ ಭಗವಾನ್ ರಾಮನನ್ನು ತನ್ನ ರಾಜ ಎಂದು ಬಣ್ಣಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಅಯೋಧ್ಯೆಯ ರಾಮಮಂದಿರದಲ್ಲಿ ರಾಮ್ ಲಲ್ಲಾನ ಮಹಾಮಸ್ತಕಾಭಿಷೇಕಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. “ನಮ್ಮ ರಾಜ ಶ್ರೀರಾಮನ ಭವ್ಯ ಮಂದಿರ ಸಿದ್ಧವಾಗಿದೆ. ಪ್ರಾಣ ಪ್ರತಿಷ್ಠಾಪನೆಗೆ ಇನ್ನೂ 7 ದಿನ ಅಷ್ಟೇ ಕಾಯಬೇಕು. ಹೌದು. ಜೈ ಶ್ರೀ ರಾಮ್. ಈ ಪೋಸ್ಟ್ನೊಂದಿಗೆ ಕನೇರಿಯಾ ತಮ್ಮ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ, ಪಾಕಿಸ್ತಾನದ ಮಾಜಿ ಸ್ಪಿನ್ನರ್ ಕೇಸರಿ ಧ್ವಜದೊಂದಿಗೆ ನಿಂತಿರುವುದನ್ನು ಕಾಣಬಹುದು. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
You must be logged in to post a comment Login