Connect with us

    KARNATAKA

    ಹೊಳೆಗೆ ಹಾರಿ ಈಜಾಡುತ್ತ ಹೋಗಿ ಊರಿಗೆ ಕರೆಂಟ್ ಕೊಟ್ಟ ಸಾಹಸಿಗ ‘ಪವರ್ ಮ್ಯಾನ್’..!

    ಉಡುಪಿ : ಮೆಸ್ಕಾಂ ಸಿಬಂದಿ (powerman) ಹೊಳೆಯಲ್ಲಿ ಈಜಾಡುತ್ತಾ ನದಿ ದಾಟಿ ಸಾಹಸ ಮೆರೆದು ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ  ವಿದ್ಯುತ್ ಸಂಪರ್ಕ ನೀಡಿದ ಘಟನೆ ಉಡುಪಿ ಹೆಬ್ರಿಯಲ್ಲಿ ಬೆಳಕಿಗೆ ಬಂದಿದೆ.

    ಮೆಸ್ಕಾಂ ಸಿಬ್ಬಂದಿ ಪ್ರಮೋದ್  ಸಾಹಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಿವಪುರ ಗ್ರಾಮದ ಉಪ್ಪಳ ಮೂರು ಸಾಲು ಹೊಳೆಯ ಮಧ್ಯದಲ್ಲಿ ಹಾದುಹೋದ ವಿದ್ಯುತ್ ತಂತಿ ತುಂಡಾಗಿ ಹಲವಾರು ದಿನಗಳು ಕಳೆದಿತ್ತು. ವಿಪರೀತ ಮಳೆಯಿಂದಾಗಿ ದುರಸ್ತಿ ಮಾಡಲಾಗದೆ ಹಾಗೆ ಉಳಿದಿತ್ತು. ಈ ಪರಿಸರದ ಜನ ವಿದ್ಯುತ್ ಮೋಟರ್‌ ಗಳನ್ನು ಬಳಸಲಾಗದೆ ಸಮಸ್ಯೆಯನ್ನು ಎದುರಿಸುತ್ತಿದ್ದರು.

    ಈ ವಿಷಯ ತಿಳಿದ ದಾವಣಗೆರೆ ಚೆನ್ನಗಿರಿ ಮೂಲದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಹಾಗೂ ಅರೆಕಾಲಿಕ ಸಿಬ್ಬಂದಿ ಸುಧೀರ್ ಸಹಾಯದೊಂದಿಗೆ ಕೇವಲ ಇಬ್ಬರೇ ತೆರಳಿ ಸಮಸ್ಯೆ ಬಗೆಹರಿಸಿದ್ದಾರೆ.  ವಿದ್ಯುತ್ ತಂತಿಯ ಒಂದು ತುದಿಗೆ ಹಗ್ಗವನ್ನು ಕಟ್ಟಿ ಸುಮಾರು 70 ಅಡಿ ದೂರಕ್ಕೆ ಈಜಾಡಿಕೊಂಡು ಹೋಗಿ ತುಂಡಾಗಿದ್ದ ವಿದ್ಯುತ್ ತಂತಿಯನ್ನು ದುರಸ್ತಿಪಡಿಸಿ  ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ. ಪ್ರಮೋದ್ ಅವರು ಕಳೆದ 2 ವರ್ಷದ ಹಿಂದೆ ಹೆಬ್ರಿ ಮೆಸ್ಕಾಂ ಗೆ ಸಿಬ್ಬಂದಿಯಾಗಿ ನೇಮಕಾತಿಗೊಂಡಿದ್ದು ಮೊದಲಿಂದಲೇ ಈಜನ್ನು ಕರಗತ ಮಾಡಿಕೊಂಡಿದ್ದರು. ಪ್ರಮೋದ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply