Connect with us

    FILM

    ಶೂಟಿಂಗ್‌ ಸೆಟ್‌ಗೆ ಹೋಗಿ ಜಗ್ಗೇಶ್ ವಿರುದ್ದ ಗರಂ ಆದ ದರ್ಶನ್ ಫ್ಯಾನ್ಸ್…ಕ್ಷಮೆ ಕೇಳಿದ ನಟ ಜಗ್ಗೇಶ್

    ಮೈಸೂರು ಫೆಬ್ರವರಿ 22: ದರ್ಶನ್ ಅಭಿಮಾನಿಗಳು ಹಾಗೂ ಹಿರಿಯ ನಟ ಜಗ್ಗೇಶ್ ನಡುವೆ ನಡೆಯುತ್ತಿರುವ ಗಲಾಟೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೀಳಾಗಿ ನಟ ಜಗ್ಗೇಶ್ ಮಾತನಾಡಿದ್ದಾರೆ ಎಂಬ ವಿಚಾರದ ಕುರಿತಾಗಿ ತೋತಾಪುರಿ ಸೆಟ್‍ನಲ್ಲಿ ನಟ ದರ್ಶನ್ ಅಭಿಮಾನಿಗಳ ಪ್ರತಿಭಟನೆ ಮಾಡಿದ್ದಾರೆ.


    ಸಿನಿಮಾ ಜಾಹಿರಾತು ಕೊಡುವ ವಿಚಾರದ ಬಗ್ಗೆ ನಿರ್ದೇಶಕರ ಜೊತೆ ಮಾತನಾಡುವಾಗ, ದರ್ಶನ್ ಅಭಿಮಾನಿಗಳ ಥರದವರು ನಮ್ಮಲ್ಲಿಲ್ಲ ಎಂದು ತಗಲ್ಲಾಕ್ಕೊಂಡಿದ್ದಾರೆ. ಮೈಸೂರಿನಲ್ಲಿ ಸಿನಿಮಾ ಶೂಟಿಂಗ್‌ವೊಂದರಲ್ಲಿ ಜಗ್ಗೇಶ್ ಭಾಗಿಯಾಗಿದ್ದರು. ಶೂಟಿಂಗ್ ಸ್ಪಾಟ್‌ಗೆ ಬಂದ ದರ್ಶನ್ ಅಭಿಮಾನಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ. ಪರಿಸ್ಥಿತಿಯನ್ನು ಕೂಲ್ ಆಗಿ ಮ್ಯಾನೇಜ್ ನೋಡಲು ನೋಡಿದ್ದಾರೆ. ಆಯ್ತು, ಸುಮ್ಮನೇ ಇರ್ರೋ ಅಂದ್ರೂ ಅಭಿಮಾನಿಗಳು ಬಿಟ್ಟಿಲ್ಲ. ಕ್ಷಮೆ ಕೇಳಲೇಬೇಕೆಂದು ಒತ್ತಾಯಿಸಿದ್ದಾರೆ.

    ಡಿ ಬಾಸ್’ ಅಭಿಮಾನಿಗಳ ಕ್ಷಮೆ ಕೇಳಿದ ಜಗ್ಗೇಶ್, ದರ್ಶನ್ ಮತ್ತು ನನ್ನ ನಡುವೆ ತಂದಿಡುವ ಹುನ್ನಾರ ಮಾಡಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ರಾಜಕೀಯ ಇದೆ. ಪಿತೂರಿ ಮಾಡಿದ್ದಾರೆ. ನಾನು ದರ್ಶನ್ ಬಗ್ಗೆ ಆ ರೀತಿ ಮಾತನಾಡಲೇ ಇಲ್ಲ. ನಾನು ಒಂದು ಪತ್ರಿಕೆಯ ಬಗ್ಗೆ ಮಾತನಾಡಿದೆ. ಈ ವಿಚಾರವನ್ನು ಇಟ್ಟುಕೊಂಡು ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ನನಗೆ ಇದಕ್ಕೂ ಸಂಬಂಧವಿಲ್ಲ, ಇಂಡಸ್ಟ್ರೀಯಲ್ಲಿ ದೊಡ್ಡ ರಾಜಕೀಯ ನಡೆಯುತ್ತಿದೆ ಎಂದು ದರ್ಶನ್ ಅಭಿಮಾನಿಗಳಿಗೆ ನಟ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply