FILM
5 ವರ್ಷಗಳ ಬಳಿಕ ಕಿಚ್ಚನಿಗೆ ದರ್ಶನ್ ಪ್ರತಿಕ್ರಿಯೆ!
ಬೆಂಗಳೂರು, ಡಿಸೆಂಬರ್ 22: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಘಟನೆ ನಡೆದು ಎರಡು ದಿನಗಳಾಗಿದ್ದರೂ, ದರ್ಶನ್ ಮಾತ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ.
ಡಿಸೆಂಬರ್ 21 ತನಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ದರ್ಶನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಆದರೆ, ಎಲ್ಲರಿಗೂ ಅಚ್ಚರಿ ಹಾಗೂ ಖುಷಿಯಾಗಿರೋದು ಕಿಚ್ಚ ಸುದೀಪ್ ಬೆಂಬಲಕ್ಕೂ ದರ್ಶನ್ ಥ್ಯಾಂಕ್ಸ್ ಹೇಳಿದ್ದಾರೆ. ಇದೇ ಐದು ವರ್ಷಗಳ ಹಿಂದೆ ದರ್ಶನ್ ಒಂದೇ ಒಂದು ಟ್ವೀಟ್ ಮೂಲಕ ಕಿಚ್ಚ ಸುದೀಪ್ ಫ್ರೆಂಡ್ಶಿಪ್ಗೆ ಗುಡ್ಬೈ ಹೇಳಿದ್ದರು. ಈಗ ಅದೇ ಟ್ವೀಟ್ ಮೂಲಕ ಕಿಚ್ಚ ಸುದೀಪ್ಗೆ ಧನ್ಯವಾದ ಹೇಳಿದ್ದು ಇಬ್ಬರ ಅಭಿಮಾನಿಗಳಿಗೂ ಅಚ್ಚರಿ ಜೊತೆ ಡಬಲ್ ಖುಷಿಯಾಗಿರೋದಂತೂ ಸತ್ಯ.
https://twitter.com/dasadarshan/status/1605581702512119811
ಕಿಚ್ಚ ಸುದೀಪ್ಗೆ ದರ್ಶನ್ ಪ್ರತಿಕ್ರಿಯೆ: ಹೊಸಪೇಟೆಯಲ್ಲಿ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆಯ ಬಳಿಕ ಕಿಚ್ಚ ಸುದೀಪ್ ಪತ್ರ ಬರೆದಿದ್ದರು. ದರ್ಶನ್ ದೂರವಿದ್ದರೂ ಅದ್ಯಾವುದನ್ನೂ ಲೆಕ್ಕಿಸದೆ ಬೆಂಬಲಕ್ಕೆ ನಿಂತಿದ್ದರು. ಈಗ ಘಟನೆ ನಡೆದು ಎರಡು ದಿನಗಳ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟರ್ ಮೂಲಕವೇ ‘ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಇದೇ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
You must be logged in to post a comment Login