Connect with us

    KARNATAKA

    ಬೆಂಕಿಯ ಕೆನ್ನಾಲಿಗೆ ಸುಟ್ಟುಹೋದ ದಾವಣಗೆರೆಯ ಬಾಂಬೆ ಬಿಗ್ ಬಜಾರ್, ಲಕ್ಷಾಂತರ ರೂಪಾಯಿ ನಷ್ಟ..!

    ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

     

    ಬುಧವಾರ ಮುಂಜಾನೆ ಈ ಅಗ್ನಿಅನಾಹುತಾ ಸಂಭವಿದ್ದು ವಿದ್ಯುತ್ ಶಾರ್ಟ್ ಸರ್ಕೀಟ್ ಕಾರಣವೆಂದು ಶಂಕಿಸಲಾಗಿದೆ. ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ಕೆನ್ನಾಲಿಗೆ 40 ಲಕ್ಷದಷ್ಟು ಬಟ್ಟೆ ಹಾಗೂ ವಸ್ತುಗಳು ಬೆಂಕಿಗೆ ಸುಟ್ಟು‌ ಭಸ್ಮವಾಗಿವೆ. ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ಕಿಡಿ ತಗುಲಿ ಬಟ್ಟೆ ಅಂಗಡಿಗೆ ಬೆಂಕಿ ಬಿದ್ದಿದೆ ಎನ್ನಲಾಗಿದೆ.
    ಅಂಗಡಿಯಲ್ಲಿದ್ದ ಬಟ್ಟೆಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆ ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ಹೋಟೆಲ್ ಗೂ ವ್ಯಾಪಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply