KARNATAKA
ಪ್ರೀತಿ ನಿರಾಕರಿಸಿದ ಯುವತಿಯನ್ನ ನಡು ರಸ್ತೆಯಲ್ಲೇ ಚುಚ್ಚಿ ಸಾಯಿಸಿದ ಪಾಗಲ್ ಪ್ರೇಮಿ
ದಾವಣಗೆರೆ ಡಿಸೆಂಬರ್ 22: ಪ್ರೀತಿಯನ್ನು ನಿರಾಕರಿಸಿದಳೆಂದು ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಹಾಡುಹಗಲೇ ನಡುರಸ್ತೆಯಲ್ಲಿ ಮನಬಂದಂತೆ ಚುಚ್ಚಿ ಸಾಯಿಸಿದ ಘಟನೆ ದಾವಣಗೆರೆ ನಗರದ ಬಿಜೆ ಬಡಾವಣೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ವಿನೋಭ ನಗರದ ನಿವಾಸಿ 28 ವರ್ಷದ ಚಾಂದ್ ಸುಲ್ತಾನಾ ಎಂದು ಗುರುತಿಸಲಾಗಿದೆ. ಆರೋಪಿ ಪಾಗಲ್ ಪ್ರೇಮಿ ಚಾಂದ್ ಫೀರ್ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಇಲ್ಲಿನ ವಿನೋಭ ನಗರದ ನಿವಾಸಿ ಚಾಂದ್ ಸುಲ್ತಾನಾ ದಾವಣಗೆರೆ ವಿವಿಯಲ್ಲಿ ಎಂಕಾಂ ಪದವಿ ಮುಗಿಸಿ ತೆರಿಗೆ ಸಲಹೆಗಾರರಾದ ಕೆ.ಮಹ್ಮದ್ ಭಾಷಾ ಅವರ ಬಳಿ ಸಿ.ಎ.ಗಾಗಿ ತೆರಬೇತಿ ಪಡೆಯುತ್ತಿದ್ದಳು. ಇದೇ ಕಚೇರಿಯಲ್ಲಿನ ಹುಡುಗನ ಜೊತೆಗೆ ಇತ್ತೀಚಿಗೆ ನಿಶ್ಚಿತಾರ್ಥ ಸಹ ಮಾಡಿಕೊಂಡಿದ್ದಳು ಇದರಿಂದ ಕೆರಳಿದ ಪಾಗಲ್ ಪ್ರೇಮಿ ಚಾಂದ್ ಫೀರ್ ಆಕೆಯನ್ನು ನಡು ರಸ್ತೆಯಲ್ಲೇ ಕೊಂದು ಹಾಕಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಂತರ ಚಾಂದ್ ಫೀರ್ ವಿಷ ಸೇವಿಸಿದ್ದು ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login