Connect with us

    KARNATAKA

    ದಾವಣಗೆರೆ: ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು!

    ದಾವಣಗೆರೆ, ಸೆಪ್ಟೆಂಬರ್ 01: ಸಾವರ್ಕರ್ ಪೋಸ್ಟರ್ ಅನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಹರಿದು ಹಾಕಿ ವಿಕೃತಿ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಗರದಾದ್ಯಂತ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಸಾವರ್ಕರ್ ಹಾಗೂ ರೇಣುಕಾಚಾರ್ಯ ಫ್ಲೆಕ್ಸ್ ಗಳನ್ನು ಬೆಂಬಲಿಗರು ಹಾಕಿದ್ದರು. ಇದೀಗ ಈ ಫ್ಲೆಕ್ಸ್‌ ಗಳನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.

    ಹೊನ್ನಾಳಿ ಪಟ್ಟಣ ಹಾಗೂ ಗೊಲ್ಲರಹಳ್ಳಿಯಿಂದ ಹೊನ್ನಾಳಿ ಮಾರ್ಗವಾಗಿ ಈ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಇದೀಗ ಈ ರೀತಿ ವಿಕೃತಿ ಮೆರೆದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಹೊನ್ನಾಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply