LATEST NEWS
ಉಡುಪಿ ಮರಳು ಸಮಸ್ಯೆ ಅಹೋರಾತ್ರಿ ಧರಣಿಗೆ ನಿರ್ಧಾರ
ಉಡುಪಿ ಮರಳು ಸಮಸ್ಯೆ ಅಹೋರಾತ್ರಿ ಧರಣಿಗೆ ನಿರ್ಧಾರ
ಉಡುಪಿ ಅಕ್ಟೋಬರ್ 19: ಉಡುಪಿ ಜಿಲ್ಲೆಯಲ್ಲಿ ಮರಳು ಸಮಸ್ಯೆಯನ್ನು ಇದೇ ತಿಂಗಳ 25 ರ ಒಳಗೆ ಜಿಲ್ಲಾಡಳಿತ ಪರಿಹರಿಸದಿದ್ದರೆ ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಸಿದ್ದಾರೆ.
ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ತಿಂಗಳ 25 ರ ಒಳಗೆ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂಘಸಂಸ್ಥೆಗಳ ಜೊತೆ ಸೇರಿ ಪಕ್ಷಾತೀತವಾಗಿ ಅನಿರ್ಧಿಷ್ಠಾವಧಿ ಧರಣಿ ನಡೆಸಲಾಗುವುದು ಎಂದು ಹೇಳಿದರು.
ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಮರಳು ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯ ತೊರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತದ ಕ್ರಮದಿಂದಾಗಿ ಕಾರ್ಮಿಕರು ,ಮರಳು ಸಾಗಾಟಗಾರರು,ಮನೆ ನಿರ್ಮಾಣ ಮಾಡುವವರು ,ಕಟ್ಟಡ ಕೆಲಸಗಾರರಿಗೆ ಸಮಸ್ಯೆ ಉಂಟಾಗಿದೆ ಎಂದು ಹೇಳಿದರು.
You must be logged in to post a comment Login