Connect with us

    LATEST NEWS

    ಅಪಘಾತದ ವೇಳೆ ಆಟೋ ರಿಕ್ಷಾ ಎತ್ತಿ ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

    ಮಂಗಳೂರು ಸೆಪ್ಟೆಂಬರ್ 10:- ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.


    7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು
    ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply