Connect with us

KARNATAKA

ಕುಡಿದ ಮತ್ತಿನಲ್ಲಿ 6 ಮಂದಿ ಸಜೀವ ದಹನ ಮಾಡಿದ ಆರೋಪಿಯ ಶವ ಪತ್ತೆ

ಮಡಿಕೇರಿ ಎಪ್ರಿಲ್ 6: ಕುಡಿದ ಮತ್ತಿನಲ್ಲಿ ಇಡೀ ರಾಜ್ಯವೇ ಬೆಚ್ಚಿಬಿಳಿಸುವಂತ ಕೃತ್ಯ ಎಸಗಿದ್ದ, ಆರೋಪಿಯ ಮೃತದೇಹ ಇಂದು ಪತ್ತೆಯಾಗಿದೆ.

ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿ ಗ್ರಾಮದಲ್ಲಿ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ, ಮನೆಯಲ್ಲಿದ್ದ ಆರು ಮಂದಿಯನ್ನು ಸಜೀವವಾಗಿ ದಹಿಸಿ ಪರಾರಿಯಾಗಿದ್ದ ಆರೋಪಿ ಬೋಜ ಮೃತದೇಹ ಮುಗುಟಗೇರಿ ಗ್ರಾಮದ ನರೇಶ್‌ ಅವರ ಕಾಫಿ ತೋಟದಲ್ಲಿ ಮೃತದೇಹ ಪತ್ತೆಯಾಗಿದೆ,


ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಮದ್ಯದ ಅಮಲಿನಲ್ಲಿದ್ದ ಬೋಜ, ತನ್ನ ಕುಟುಂಬದವರು ವಾಸವಾಗಿದ್ದ ಮನೆಗೇ ಶನಿವಾರ ನಸುಕಿನಲ್ಲಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಾಲ್ವರು ಮಕ್ಕಳು ಹಾಗೂ ಆರೋಪಿಯ ಪತ್ನಿಯೂ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದರು. ಆರೋಪಿ ಬೋಜ ಹಾಗೂ ಆತನ ಪತ್ನಿ ಬೇಬಿ ನಡುವೆ ಗಲಾಟೆ ನಡೆದು ಅದರ ಸೇಡಿಗೆ ಕುಟುಂಬಸ್ಥರು ನಿದ್ರಿಸುತ್ತಿದ್ದ ವೇಳೆ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಾಕಿದ್ದ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *