LATEST NEWS
ಅಜಿಲಮೊಗರು ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಬಂಟ್ವಾಳ ಜುಲೈ 05: ಮೀನು ಹಿಡಿಯಲು ನೇತ್ರಾವತಿ ನದಿಗೆ ಮೀನು ಹಿಡಿಯಲು ತೇರಿಳಿದ್ದ ವ್ಯಕ್ತಿಯೋರ್ವ ನದಿಗೆ ಬಿದ್ದು ಸಾವನಪ್ಪಿದ ಸಾವನಪ್ಪಿದ ಘಟನೆ ಗುರುವಾರ ಸಂಜೆ ತಾಲೂಕಿನ ಅಜಿಲಮೊಗರು ಕೂಟೇಲು ಬಳಿ ಸಂಭವಿಸಿದೆ.
ಸುರತ್ಕಲ್ ಕಾನ ಮೂಲದ ಮೈಕಲ್ (53) ನೀರುಪಾಲಾದವರು. ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಸ್ನೇಹಿತ ಸುದೀಪ್ ಜೊತೆ ಮೀನು ಹಿಡಿಯಲು ಅಜಿಲಮೊಗರು ಭಾಗಕ್ಕೆ ಹೋಗಿದ್ದರು.
ನೇತ್ರಾವತಿ ನದಿ ಸೇರುವ ಪಕ್ಕದಲ್ಲೇ ತೋಡಿಗೆ ಅಡ್ಡವಾಗಿ ನಿರ್ಮಿಸಿರುವ ಹಳೆಯ ಕಿಂಡಿ ಅಣೆಕಟ್ಟಿನ ಮೇಲೆ ನಿಂತು ಗಾಳ ಹಾಕುತ್ತಿದ್ದ ವೇಳೆ ಮೈಕೆಲ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆಎನ್ನಲಾಗಿದೆ. ತೋಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಹೀಗಾಗಿ ಘಟನೆಯಲ್ಲಿ ಅಲ್ಲೇ ಪಕ್ಕದಲ್ಲಿದ್ದವರು ನೋಡಿದರೂ ಏನೂ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಶುಕ್ರವಾರ ಬೆಳಿಗ್ಗೆ ನೇತ್ರಾವತಿ ನದಿಯಲ್ಲಿ ನೀರು ಇಳಿಕೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
You must be logged in to post a comment Login