BANTWAL
ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಬಂಟ್ವಾಳ ಮೇ 07 : ವ್ಯಕ್ತಿಯೊಬ್ಬರ ಮೃತದೇಹ ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆಯಲ್ಲಿ ಮೃತದೇಹ ರಕ್ತಸಿಕ್ತವಾಗಿ ಬಿದ್ದುಕೊಂಡಿದ್ದು, ಹೊರಗಡೆಯಲ್ಲಿ ಆತನ ಬೈಕ್ ಪತ್ತೆಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದು ಶಂಕಿಸಲಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಪೆಕ್ಟರ್ ಶಿವಕುಮಾರ್, ಪಿಎಸ್ಐ ಹರೀಶ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login