LATEST NEWS
ಪಾಣೆಮಂಗಳೂರು ಸೇತುವೆ ಬಳಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಜೇಶ್ವರ ಕಣ್ವತೀರ್ಥ ಸಮುದ್ರ ತೀರದಲ್ಲಿ ಪತ್ತೆ
ಕಾಸರಗೋಡು ಜುಲೈ 31: ಪಾಣೆಮಂಗಳೂರು ಸೇತುವೆಯಲ್ಲಿ ಬೈಕ್ ಚಾಲನಾ ಸ್ಥಿತಿಯಲ್ಲಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಜೇಶ್ವರ ಕಣ್ವತೀರ್ಥ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಮೃತನನ್ನು ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29)ಎಂದು ಗುರುತಿಸಲಾಗಿದೆ. ಈತ ಜುಲೈ 28 ರಂದು ಬಂಟ್ವಾಳ ಸಮೀಪದ ಪಾಣೆಮಂಗಳೂರು ಸೇತುವೆಯಲ್ಲಿ ಮುಂಜಾನೆ ಬೈಕನ್ನು ಚಲನಾ ಸ್ಥಿತಿಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದ, ಈ ಬಗ್ಗೆ ಅವರ ತಾಯಿ ಬೆಂಗಳೂರು ಪೋಲೀಸರಿಗೆ ದೂರು ನೀಡಿದ್ದರು.
ಕಾಸರಗೋಡು ಪೋಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಿದ್ದರು. ಕಾಸರಗೋಡು ಪೋಲೀಸರು ಬೆಂಗಳೂರಿನಲ್ಲಿರುವ ಆತನ ಮನೆಯವರಿಗೆ ವಿಷಯ ತಿಳಿಸಿದ್ದು. ಇದೀಗ ಆತನ ಮನೆಯವರು ಕಾಸರಗೋಡಿಗೆ ಇಂದು ತಲುಪಿದ್ದು ಆತನ ಗುರುತು ಪತ್ತೆಹಚ್ಚಿದ್ದಾರೆ.
ಮೃತದೇಹ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿದ್ದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
You must be logged in to post a comment Login