Connect with us

LATEST NEWS

ವಲಸೆ ಕಾರ್ಮಿಕನ ಮೃತದೇಹ ಶೌಚಾಲಯದಲ್ಲಿ ಪತ್ತೆ

ಉಡುಪಿ ಸೆಪ್ಟೆಂಬರ್ 21: ವಲಸೆ ಕಾರ್ಮಿಕರೊಬ್ಬರ ಮೃತದೇಹ ಮನೆಯ ಶೌಚಾಲಯದಲ್ಲಿ ಪತ್ತೆಯಾದ ಘಟನೆ ಕಲ್ಯಾಣಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಲ್ಲಿಕಾರ್ಜುನ(60) ಎಂದು ಗುರುತಿಸಲಾಗಿದ್ದು ಅವರ ವಾಸದ ಬಗ್ಗೆ ಮಾಹಿತಿ ತಿಳಿದಿಲ್ಲ ಎಂದು ಹೇಳಲಾಗಿದೆ.


ತೋಟದ ಮಾಲಿಕ ಶ್ರೀನಿವಾಸ್ ಭಟ್ ಅವರ ಮನೆಯಲ್ಲಿ ಕೆಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಮಲ್ಲಿಕಾರ್ಜುನ ಹೆಸರಿನಿಂದ ಪರಿಚಯಿಸಿಕೊಂಡಿದ್ದ, ಮಾಲಿಕರು ವಾಸವಿರಲು ಕೊಠಡಿ ನೀಡಿ ಸಹಕರಿಸಿದ್ದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡುವ ವ್ಯವಸ್ಥೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಮಾಡಿದ್ದು. ಮೃತರ ಬಗ್ಗೆ ಸ್ವಷ್ಟ ಮಾಹಿತಿ ತಿಳಿದುಬಂದಿಲ್ಲ. ಸಂಬಂಧಿಕರು ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *