Connect with us

    LATEST NEWS

    ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕನ ಶವ ಬಾವಿಯಲ್ಲಿ ಪತ್ತೆ

    ಉಡುಪಿ ಅಗಸ್ಟ್ 03: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಲೆಕ್ಕ ಪರಿಶೋಧಕನ ಶವ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕರಂಬಳ್ಳಿ ವಿ.ಎಮ್ ನಗರದ ನಿವಾಸಿ ಸತೀಶ್ ಕುಮಾರ್ (54) ಎಂದು ಗುರುತಿಸಲಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


    ಸತೀಶ್ ಕುಮಾರ್ ಕಳೆದ ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದರು, ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ನೆರವಾದರು.

    Share Information
    Advertisement
    Click to comment

    You must be logged in to post a comment Login

    Leave a Reply