LATEST NEWS
ಬೈಂದೂರು – ಕೂಸಳ್ಳಿ ಫಾಲ್ಸ್ ನಲ್ಲಿ ಮುಳುಗಿ ನಾಪತ್ತೆಯಾಗಿದ್ದ ವಿಧ್ಯಾರ್ಥಿ ಮೃತದೇಹ ಪತ್ತೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕುಂದಾಪುರ ಎಪ್ರಿಲ್ 08: ಕೂಸಳ್ಳಿ ಫಾಲ್ಸ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಕಲಿಯುತ್ತಿದ್ದಾನೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಶುಕ್ರವಾರ ತನ್ನ ಸ್ನೇಹಿತರೊಂದಿಗೆ ಕೂಸಳ್ಳಿ ಫಾಲ್ಸ್ ಗೆ ಬಂದಿದ್ದರು. ಈ ವೇಳೆ ಚಿರಾಂತ್ ಈಜಲು ತೆರಳಿದ್ದ. ಆದರೆ ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ ಶುಕ್ರವಾರ ಸಂಜೆಯೇ ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯರು ರಾತ್ರಿಯ ತನಕ ಹುಡುಕಾಟ ನಡೆಸಿದ್ದಾರೆ. ಶನಿವಾರ ಮತ್ತೆ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login