Connect with us

    KARNATAKA

    ತುಮಕೂರು ಬಳಿ ಭೀಕರ ಅಪಘಾತ: ಇಬ್ಬರ ಸಾವು- 10ಕ್ಕೂ ಅಧಿಕ ಮಂದಿ ಸ್ಥಿತಿ ಗಂಭೀರ

    ತುಮಕೂರು, ಜೂನ್ 20: ಬೆಳ್ಳಂಬೆಳಗ್ಗೆ ಕೆಎಸ್‌ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ.

    ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಗಿರೀಶ್​ (37), ಮಾನ್ಯ (17), ಮೃತ ದುರ್ದೈವಿಗಳು. ಇವರಿಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

    ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಝೈಲೋ ಕಾರು ಬರುತ್ತಿದ್ದರೆ, ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಬಸ್ ಹೊರಟಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನ ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply