DAKSHINA KANNADA
ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್
ಪುತ್ತೂರು ಫೆಬ್ರವರಿ 10: ಕೌಟುಂಬಿಕ ಕಲಹ ಹಿನ್ನಲೆ ಕೆಎಸ್ಆರ್ ಟಿಸಿ ಕಂಡೆಕ್ಟರ್ ರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಇವರು ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಡೆತ್ ನೋಟ್ ನಲ್ಲಿ ತನ್ನ ಸಹೋದರನ ವಿರುದ್ಧ ಅಸಮಾಧಾನ ಹೊರಹಾಕಿರುವ ಬಾಲಕೃಷ್ಣ ಅವರು ಕೆಎಸ್ ಆರ್ ಟಿಸಿ ಸಂಸ್ಥೆಯಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಅವರು , ನನ್ನ ಮಕ್ಕಳು ಹಾಗು ತಾಯಿಯನ್ನು ಒಳ್ಳೆಯದರಲ್ಲಿ ನೋಡಿಕೊಳ್ಳಿ ಎಂದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
You must be logged in to post a comment Login