Connect with us

    LATEST NEWS

    ದೀಪಕ್ ರಾವ್ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ರಾಜನಾಥ್ ಸಿಂಗ್ ಗೆ ಮನವಿ

    ದೀಪಕ್ ರಾವ್ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ರಾಜನಾಥ್ ಸಿಂಗ್ ಗೆ ಮನವಿ

    ನವದೆಹಲಿ ಜನವರಿ 4 : ಕರ್ನಾಟಕದಲ್ಲಿ ನಡೆಯುತ್ತಿರುವ ಸರಣಿ ರಾಜಕೀಯ ಕೊಲೆಗಳ ತನಿಖೆಯನ್ನು ಎನ್ ಐಎಗೆ ವಹಿಸುವಂತೆ ಬಿಜೆಪಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದೆ. ರಾಜ್ಯದಲ್ಲಿ ಸರಣಿಯಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಈ ಎಲ್ಲಾ ಪ್ರಕರಣಗಳ ತನಿಖೆಯನ್ನು ಎನ್ ಐಎ ನೀಡಬೇಕೆಂದು ಆಗ್ರಹಿಸಿದೆ.

    ಇಂದು ಕರ್ನಾಟಕದ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಗಳು ಹಾಗೂ ನಿನ್ನೆ ನಡೆದ ದೀಪಕ್ ರಾವ್ ಅವರ ಕೊಲೆ ಪ್ರಕರಣ ತನಿಖೆಯನ್ನು ಎನ್ ಐಎ ಗೆ ವಹಿಸುವಂತೆ ಮನವಿ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಕರ್ನಾಟಕದ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ್, ಪ್ರಹ್ಲಾದ್ ಜೋಶಿ ಮತ್ತಿತರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply