MANGALORE
ಡಿ.29ರಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳೂರಿಗೆ
ಡಿ.29ರಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳೂರಿಗೆ
ಮಂಗಳೂರು, ಡಿಸೆಂಬರ್ 28 : ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿಸೆಂಬರ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಮಂಗಳೂರಿನಲ್ಲಿ ಇಂಕ್ಯುಬೇಷನ್ ಸೆಂಟರನ್ನು ಅವರು ಉದ್ಘಾಟಿಸಲಿದ್ದಾರೆ.
ನಗರದ ಮಲ್ಲಿಕಟ್ಟೆಯ ಮಹಾನಗರಪಾಲಿಕೆ ಸಂಕೀರ್ಣದಲ್ಲಿ ಅವರ ರಾಜ್ಯಸಭಾ ಸದಸ್ಯರ ಅನುದಾನದಲ್ಲಿ ಈ ಇಂಕ್ಯುಬೇಷನ್ ಸೆಂಟರನ್ನು ನಿರ್ಮಿಸಲಾಗಿದೆ.
ಅಂದಿನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಜೆ.ಆರ್. ಲೋಬೋ, ಮೇಯರ್ ಕವಿತಾ ಸನಿಲ್ ಅವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
You must be logged in to post a comment Login