KARNATAKA
ಫೆಬ್ರವರಿ 16 ರಿಂದ ಪಿಯು ಮತ್ತು ಪದವಿ ಕಾಲೇಜು ಪ್ರಾರಂಭ – ಶಿಕ್ಷಣ ಸಚಿವ
ಬೆಂಗಳೂರು: ಹಿಜಾಬ್ ಕೇಸರಿ ವಿವಾದದ ಬಳಿಕ ಇಂದು ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ನಡೆದಿದ್ದು, ಈ ಹಿನ್ನಲೆ ಇದೀಗ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜು ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್ ಮಾಹಿತಿ ನೀಡಿದ್ದು, ನಮ್ಮ ಪೋಷಕರು ಶಿಕ್ಷಣ ಮುಂದುವರಿಸುವ ಉದ್ದೇಶದಲ್ಲಿದ್ದಾರೆ. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶ ಪಾಲಿಸಬೇಕು. ಘಟನೆ ಸಂಬಂಧ ಮಾಹಿತಿ ಕಲೆಹಾಕಲಾಗುತ್ತಿದೆ. ನಾವು ಹೇಳುವುದಿಷ್ಟೇ, ಹೈಕೋರ್ಟ್ ಆದೇಶ ಪಾಲಿಸಬೇಕು. ಆದೇಶದಲ್ಲಿರುವುದನ್ನ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
You must be logged in to post a comment Login