Connect with us

BANTWAL

ಅನ್ನಭಾಗ್ಯ ಯೋಜನೆಗೆ ಕನ್ನ ಹಾಕಿದವರ ಬಗ್ಗೆ ತನಿಖೆಗೆ ಒತ್ತಾಯಿಸಿ ಬಂಟ್ವಾಳ ತಾಲೂಕು ಕಚೇರಿಗೆ ಮುತ್ತಿಗೆ..!

ಬಂಟ್ವಾಳ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳವು ತನಿಖೆಯಾಗದಿರುವ ಬಗ್ಗೆ ಹಾಗೂ 2023 ನೇ ಸಾಲಿನಲ್ಲಿ ಅಕ್ರಮ ಸಕ್ರಮ ಜಮೀನು ಮಂಜೂರಾದ ಫಲನುಭವಿಗಳಿಗೆ ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿ, ತಾಲೂಕು ಕಚೇರಿ ಮುಂದೆ ಮಾಜಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತ್ರತ್ವದಲ್ಲಿ ಬಿಸಿರೋಡಿನ ಆಡಳಿತ ಸೌಧದ ಮುಂಭಾಗದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

 

ಬಡವರಿಗೆ ನೀಡುವ ಪಡಿತರ ಗೋದಾಮಿನಿಂದ 3850 ಕಿಂಟ್ವಾಲ್ ಅಕ್ಕಿ ಕಳವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ತನಿಖೆ ಮಾಡಿ ಹಲವು ತಿಂಗಳು ಕಳೆದರೂ ತಪ್ಪಿತಸ್ಥರು ಯಾರು ಎಂದು ಗುರುತಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ವಿಷಾಧನೀಯ ಎಂದು ಅವರು ಹೇಳಿದರು. ಅಕ್ಕಿ ಕಳವು ನಡೆಸುತ್ತಿರುವ ದೊಡ್ಡ ಜಾಲವೊಂದು ಇದ್ದು, ಅವರನ್ನು ಕೆಲವೊಂದು ಜನಪ್ರತಿನಿಧಿಗಳು ರಕ್ಷಣೆ ಮಾಡುತ್ತಿರುವುದು ವಿಷಾಧನೀಯ.ಹಾಗಾಗಿ ಶೀಘ್ರವಾಗಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಅವರು ಒತ್ತಾಯ ಮಾಡಿದ್ದರೆ. ಇದರ ಜೊತೆಗೆ 2023 ನೇ ಸಾಲಿನಲ್ಲಿ ಅಕ್ರಮ ಸಕ್ರಮ ಜಮೀನು ಮಂಜೂರಾದ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡಿರುವುದಿಲ್ಲ, ಅಲ್ಲದೆ ಸಾಗುವಳಿ ಚೀಟಿ ಸಿಕ್ಕವರಿಗೆ ಆರ್‌ಟಿಸಿ ನೀಡಿರುವುದಿಲ್ಲ ಎಂದು ಆರೋಪ ಮಾಡಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಾಂಗ್ರೆಸ್ ಪಕ್ಷ ಆರೋಪಿಗಳನ್ನು ಬಂಧಿಸದಂತೆ ರಕ್ಷಣೆ ನೀಡುತ್ತಿದೆ ಎಂದು ಆರೋಪ ಮಾಡಿದರು. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್ ಪಕ್ಷವಾಗಿದ್ದು, ಅಕ್ರಮ ಸಕ್ರಮ ಹಕ್ಕು ಪತ್ರ ನೀಡದಂತೆ ಕೂಡ ವಿರೋಧ ಮಾಡಿದೆ ಎಂದು ಆರೋಪ ಮಾಡಿದರು. ಬಿಜೆಪಿ ನಾಯಕಿ ಸುಲೋಚನ ಜಿ.ಕೆ.ಭಟ್, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ , ಪ್ರಮುಖರಾದ ಮೋಹನ್ ಪಿ‌ಎಸ್. ಪ್ರಭಾಕರ್ ಪಿ‌ಎಂ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಸುದರ್ಶನ ಬಜ, ಹರ್ಷಿಣಿ ಪುಷ್ಪಾನಂದ ಪುಂಜಾಲಕಟ್ಟೆ, ಶುಭಕರ ಶೆಟ್ಟಿ, ಹರೀಂದ್ರ ಪೈ, ಪುರುಷೋತ್ತಮ ಶೆಟ್ಟಿ ವಾಮಪದವು, ಆನಂದ ಶಂಭೂರು,ರೊನಾಲ್ಡ್ ಡಿ.ಸೋಜ,ರತ್ನ ಕುಮಾರ್ ಚೌಟ ಮತ್ತಿತರ ಪ್ರಮುಖರು ಹಾಜರಿದ್ದರು. ಪ್ರತಿಭಟನೆಯ ಬಳಿಕ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿ ಪೋಲಿಸರು ತಡೆದರು. ಈ ಸಂದರ್ಭದಲ್ಲಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಎಂದು ಮನವಿ ಮಾಡಿದರು. ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಎಸ್. ಐ.ರಾಮಕೃಷ್ಣ ನೇತ್ರತ್ವದಲ್ಲಿ ಬಗಿಪೋಲೀಸ್ ಬಂದೋಬಸ್ತ್ ಏರ್ಪಾಡು ಮಾಡಲಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *